ADVERTISEMENT

‘ನಮ್ಮ ಸಂಘ’ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಸುರೇಶ್‌ ನಿಧನ

​ಪ್ರಜಾವಾಣಿ ವಾರ್ತೆ
Published 13 ಮೇ 2021, 18:37 IST
Last Updated 13 ಮೇ 2021, 18:37 IST
ಪಿ.ಸುರೇಶ್‌
ಪಿ.ಸುರೇಶ್‌    

ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿರುವ ‘ನಮ್ಮ ಸಂಘ’ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಸುರೇಶ್‌ (45) ಅವರು ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಗುರುವಾರ ನಿಧನರಾದರು. ಇವರಿಗೆ ಪತ್ನಿ, ಪುತ್ರ ಇದ್ದಾರೆ.

‘ಗ್ರೀನ್‌ ಆಸ್ಕರ್‌’ ಪ್ರಶಸ್ತಿ ಪುರಸ್ಕೃತ ಕೃಪಾಕರ ಸೇನಾನಿ ಅವರು ಕಾಡಿನ ಸಂರಕ್ಷಣೆಗಾಗಿ ಬಂಡೀಪುರದಲ್ಲಿ ಸ್ಥಾಪಿಸಿರುವ ‘ನಮ್ಮ ಸಂಘ’ದಲ್ಲಿ 17 ವರ್ಷ ಕೆಲಸ ಮಾಡಿದ್ದರು. ಕಾಡಂಚಿನ 200 ಹಳ್ಳಿಗಳ 40 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಲು ಶ್ರಮಿಸಿದ್ದರು. ಈ ಸಾಧನೆಗಾಗಿ ‘ಏಷ್ಯಾ ಸ್ಯಾಂಚುರಿ’ ನೀಡುವ ಪರಿಸರ ಸಂರಕ್ಷಣಾ ಪ್ರಶಸ್ತಿಗೆ ಭಾಜನರಾಗಿದ್ದರು. ಹಿಂದೆ, ಕೇಂದ್ರದಲ್ಲಿ ಪರಿಸರ ಮತ್ತು ಅರಣ್ಯ ಖಾತೆ ಸಚಿವರಾಗಿದ್ದ ಜೈರಾಮ್‌ ರಮೇಶ್‌ ಅವರ ಮೆಚ್ಚುಗೆಗೂ ಪಾತ್ರರಾಗಿದ್ದ ಸುರೇಶ್‌, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಂಸ್ಥೆಯ ಮೂಲಕ ನೆರವಾಗಿದ್ದರು.

ಅಂತ್ಯಕ್ರಿಯೆಯು, ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿಯಲ್ಲಿ ಗುರುವಾರ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.