ADVERTISEMENT

ಸಂತೇಮರಹಳ್ಳಿ: ಬೈಕ್–ಕಾರು ಡಿಕ್ಕಿ, ಪೊಲೀಸ್ ಕಾನ್‌ಸ್ಟೆಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 6:29 IST
Last Updated 12 ಏಪ್ರಿಲ್ 2022, 6:29 IST
ಪ್ರಸಾದ್
ಪ್ರಸಾದ್   

ಸಂತೇಮರಹಳ್ಳಿ: ಸಮೀಪದ ರಾಷ್ಟ್ರೀಯ ಹೆದ್ದಾರಿ 209ರ ಹುಲ್ಲೇಪುರ ಕ್ರಾಸ್ ಬಳಿ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ಮೃತಪಟ್ಟಿದ್ದಾರೆ. ಎಎಸ್ಐ ಗಾಯಗೊಂಡಿದ್ದಾರೆ.

ಸಂತೇಮರಹಳ್ಳಿ ಠಾಣೆಯ ಕಾನ್‌ಸ್ಟೆಬಲ್‌, ತಾಲ್ಲೂಕಿನ ಪ್ರಸಾದ್ (33) ಮೃತಪಟ್ಟವರು. ಅದೇ ಠಾಣೆಯ ಎಎಸ್‌ಐ ರಾಜು ಅವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿ 10 ಗಂಟೆಗೆ ಅಪಘಾತ ಸಂಭವಿಸಿದೆ.

ರಾಜು ಹಾಗೂ ಪ್ರಸಾದ್ ಅವರುರಾತ್ರಿ 10.45 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರು ಮೃತಪಟ್ಟರೆ, ಗಾಯಗೊಂಡಿದ್ದ ಎಎಸ್‌ಐ ರಾಜು ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

ಕಾರು ಚಾಲಕ ಸತೀಶ್ ಕುಮಾರ್ ಎಂಬುವವರ ವಿರುದ್ಧ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.