ADVERTISEMENT

ರಾಷ್ಟ್ರಪತಿ ಭೇಟಿ: ವಾಯುಸೇನೆ ಅಧಿಕಾರಿಗಳಿಂದ ಪರಿಶೀಲನೆ

ಬೋಧನಾ ಆಸ್ಪತ್ರೆ ಉದ್ಘಾಟನೆ: ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ ಖಚಿತ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 16:34 IST
Last Updated 5 ಅಕ್ಟೋಬರ್ 2021, 16:34 IST
ಯಳಂದೂರು ತಾಲ್ಲೂಕಿನ ವಡಗೆರೆ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ನಲ್ಲಿ ಮಂಗಳವಾರ ಬಂದಿಳಿದ ವಾಯುಸೇನೆಯ ಹೆಲಿಕಾಪ್ಟರ್‌
ಯಳಂದೂರು ತಾಲ್ಲೂಕಿನ ವಡಗೆರೆ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ನಲ್ಲಿ ಮಂಗಳವಾರ ಬಂದಿಳಿದ ವಾಯುಸೇನೆಯ ಹೆಲಿಕಾಪ್ಟರ್‌   

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಗುರುವಾರ ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದ ಭಾರತೀಯ ವಾಯುಸೇನೆಯ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಮಂಗಳವಾರ ಯಳಂದೂರು ತಾಲ್ಲೂಕಿನ ವಡಗೆರೆ ಹಾಗೂ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗಳಲ್ಲಿ ಹೆಲಿಕಾಪ್ಟರ್‌ ಇಳಿಸಿ ಪರಿಶೀಲಿಸಿದರು.

ಸ್ಥಳೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಇನ್ನು ಆಗಬೇಕಾದ ಕೆಲಸಗಳ ಬಗ್ಗೆ ಸಲಹೆ–ಸೂಚನೆ ನೀಡಿದರು.

ರಾಷ್ಟ್ರಪತಿ ಬಿಳಿಗಿರಿರಂಗನ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ನಗರದ ಹೊರವಲಯದ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಬೋಧನಾ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ.

ADVERTISEMENT

ಸಿ.ಎಂ ಭೇಟಿ : ಈ ಮಧ್ಯೆ, ಬೋಧನಾ ಆಸ್ಪತ್ರೆಯ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದು ಖಚಿತವಾಗಿದೆ.

ಗುರುವಾರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೊಮ್ಮಾಯಿ, ಅಲ್ಲಿಂದ ಮಧ್ಯಾಹ್ನ 1 ಗಂಟೆಗೆಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಬರಲಿದ್ದಾರೆ. ಮಧ್ಯಾಹ್ನ 1.25ಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿಯ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರಪತಿ ಅವರನ್ನು ಸ್ವಾಗತಿಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ 450 ಹಾಸಿಗೆ ಸಾಮರ್ಥ್ಯದ ಬೋಧನಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.40ಕ್ಕೆ ರಾಷ್ಟ್ರಪತಿ ಅವರನ್ನು ಬೀಳ್ಕೊಟ್ಟ ನಂತರ, ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.