ಚಾಮರಾಜನಗರ: ರಾಜ್ಯದ ನಿಪ್ಪಾಣಿ, ಕಾರವಾರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಅಲ್ಲಿನಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪೊರಕೆ ಚಳವಳಿ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನನಿತರರು, ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಅಜಿತ್ ಪವಾರ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಮಹಾರಾಷ್ಟ್ರ ಸರ್ಕಾರ ಪದೆ ಪದೇ ಕನ್ನಡಿಗರ ಮೇಲೆ ಕ್ಯಾತೆ ತೆಗೆಯುತ್ತಿದೆ. ಅಜಿತ್ ಪವಾರ್ ಹೇಳಿಕೆ ಖಂಡನೀಯವಾದದ್ದು, ಮಹಾಜನ ವರದಿ ಪ್ರಕಾರ ಸೊಲ್ಲಾಪುರ ಸೇರಿದಂತೆ ಮಹಾರಾಷ್ಟ್ರದ ಇತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಿದೆ’ ಎಂದರು.
ಶಾ.ಮುರಳಿ, ಕಂಡಕ್ಟರ್ ಚಾ.ಸಿ.ಸೋಮನಾಯಕ, ಚಾ.ವೆಂ.ರಾಜ್ಗೋಪಾಲ್, ನಿಜಧ್ವನಿಗೋವಿಂದರಾಜು, ಗು.ಪುರುಷೋತ್ತಮ್, ತಾಂಡವಮೂರ್ತಿ, ಪಣ್ಯದಹುಂಡಿರಾಜು, ಮಹೇಶ್ಗೌಡ, ಲಿಂಗರಾಜು, ಎಂಡಿಆರ್ ಸ್ವಾಮಿ, ಶಿವಶಂಕರ್ನಾಯಕ, ನಂಜುಂಡಚಾರ್, ವೀರಭದ್ರ ಇತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.