ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆಯಾದ ಬೆನ್ನಲ್ಲೇ, ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ನಿರ್ಧರಿಸಿದೆ.
ಈ ಸಂಬಂಧ, ಪತ್ರಿಕಾ ಹೇಳಿಕೆ ನೀಡಿರುವ ಸಂಘವು ಶೀಘ್ರದಲ್ಲಿ ದರ ಹೆಚ್ಚಿಸಲಿದ್ದು ಪ್ರಯಾಣಿಕರು ಸಹಕರಿಸಬೇಕು ಎಂದು ಹೇಳಿದೆ.
'ಆರು ವರ್ಷಗಳಿಂದ ಪ್ರಯಾಣ ದರ ಹೆಚ್ಚಿಸಿಲ್ಲ. 2014ರಲ್ಲಿ ಲೀಟರ್ ಡೀಸೆಲ್ಗೆ ₹61.57 ಪೈಸೆ ಇತ್ತು. ಈಗ ₹67 ಇದೆ. ವಿಮೆ, ಟೈರ್, ಆಯಿಲ್ ಬೆಲೆ ಮತ್ತು ರಸ್ತೆ ತೆರಿಗೆ ಹೆಚ್ಚಳವಾಗಿದ್ದು, ಆರು ವರ್ಷಗಳಿಂದ ಬಸ್ಸುಗಳನ್ನು ನಷ್ಟದಲ್ಲೇ ಓಡಿಸಲಾಗುತ್ತಿದೆ. ನಷ್ಟದಿಂದಾಗಿ ಮಾಲೀಕರು ಬಸ್ ಸಂಚಾರವನ್ನೇ ಸ್ಥಗಿತಗೊಳಿಸಿದ್ದಾರೆ' ಎಂದು ಸಂಘದ ಕಾರ್ಯದರ್ಶಿ ಮುರಳಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.