ಕೊಳ್ಳೇಗಾಲ: ತಾಲ್ಲೂಕಿನ ಸೂರಾಪುರದ ಜಮೀನೊಂದರಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರಿ ಗಾತ್ರದ ಹೆಬ್ಬಾವು ಶನಿವಾರ ಪತ್ತೆಯಾಗಿದೆ.
ಗ್ರಾಮದ ಜಗದೀಶ್ ಎಂಬ ರೈತ ತನ್ನ ಜಮೀನಿನಲ್ಲಿ ಕೂಲಿ ಕಾರ್ಮಿಕರೊಂದಿಗೆ ಕಬ್ಬು ಕಟಾವಿನಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ನೋಡಿದ ಕಾರ್ಮಿಕರು ತಕ್ಷಣ ಕೆಲಸ ಬಿಟ್ಟು ಓಡಿ ಬಂದಿದ್ದಾರೆ.
ಘಟನೆಯ ಕುರಿತು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಉರಗ ತಜ್ಞ ಸ್ನೇಕ್ ಬಾಬು ಸ್ಥಳಕ್ಕೆ ಆಗಮಿಸಿ, 15 ಅಡಿ ಉದ್ದದ 15 ಕೆಜಿ ತೂಕವುಳ್ಳ ಹೆಬ್ಬಾವು ಹಿಡಿದು, ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.