ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಆಂಜನೇಯನ ದೇವಸ್ಥಾನಗಳಲ್ಲಿ, ರಾಮ ಮಂದಿರಗಳಲ್ಲಿ ರಾಮನವಮಿ ಅಂಗವಾಗಿ ವಿಶೇಷ ಪೂಜೆಗಳು ನಡೆದವು. ಭಕ್ತರಿಗೆ ಪಾನಕ ಹಾಗೂ ಪ್ರಸಾದ ವಿತರಿಸಲಾಯಿತು.
ಹರಳಕೋಟೆಯ ಆಂಜನೇಯ ದೇವಸ್ಥಾನ, ಹಳೆ ಬಸ್ ನಿಲ್ದಾಣದಲ್ಲಿರುವ ಅಭಯ ಆಂಜನೇಯ ದೇವಸ್ಥಾನ, ಶಂಕರಪುರದ ರಾಮಮಂದಿರ, ಅಗ್ರಹಾರ ಬೀದಿಯ ಪಟ್ಟಾಭಿ ರಾಮಮಂದಿರ, ಬಣಜಿಗರ ಬೀದಿಯ ರಾಮಮಂದಿರ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.