ADVERTISEMENT

ರಮೇಶ್ ಜಾರಕಿಹೊಳಿಗೆ ಶೀಘ್ರದಲ್ಲಿ ಸಚಿವ ಸ್ಥಾನ: ಸಚಿವ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 11:53 IST
Last Updated 30 ಜೂನ್ 2021, 11:53 IST
ಯುವಜನ ಕ್ರೀಡಾ ಮತ್ತು ಸಬಲೀಕರಣ ಸಚಿವ ನಾರಾಯಣ ಗೌಡ
ಯುವಜನ ಕ್ರೀಡಾ ಮತ್ತು ಸಬಲೀಕರಣ ಸಚಿವ ನಾರಾಯಣ ಗೌಡ   

ಚಾಮರಾಜನಗರ: ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮುನಿರತ್ನ ಅವರು ಸಚಿವರಾಗಲಿದ್ದಾರೆ ಎಂದು ಯುವಜನ ಕ್ರೀಡಾ ಮತ್ತು ಸಬಲೀಕರಣ ಸಚಿವ ನಾರಾಯಣ ಗೌಡ ಅವರು ಬುಧವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ರಮೇಶ ಜಾರಕಿಹೊಳಿ ಅವರ ಬಗ್ಗೆ ಗೌರವವಿದೆ. ಅವರ ಮೇಲಿನ ಆರೋಪಗಳು ಕಟ್ಟುಕಥೆ. ಆರೋಪಗಳಿಂದ ಅವರು ಮುಕ್ತರಾಗಲಿದ್ದಾರೆ. ಅವರು ಖಂಡಿತ ಮಂತ್ರಿಯಾಗುತ್ತಾರೆ. ಮುನಿರತ್ನ ಅವರೂ ಸಚಿವರಾಗುತ್ತಾರೆ' ಎಂದರು.

'ಬಾಂಬೆ ಟೀಂ, ಉಳಿದವರು ಎಲ್ಲರೂ ಒಟ್ಟಿಗೆ ಇದ್ದೇವೆ. ಕೆಲವರಿಗೆ ಮಾತ್ರ ಭಿನ್ನಾಭಿಪ್ರಾಯ ಇದೆಯಷ್ಟೇ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಮುಂದಿನ ಚುನಾವಣೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆಯುತ್ತದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.