ADVERTISEMENT

ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 3:21 IST
Last Updated 27 ಜನವರಿ 2021, 3:21 IST
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು (ಎಡಚಿತ್ರ). ರೋಟರಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಯೋಧ ಸೀತಾರಾಮ್ ಅವರನ್ನು ಸನ್ಮಾನಿಸಲಾಯಿತು
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು (ಎಡಚಿತ್ರ). ರೋಟರಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಯೋಧ ಸೀತಾರಾಮ್ ಅವರನ್ನು ಸನ್ಮಾನಿಸಲಾಯಿತು   

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ 72ನೇ ಗಣರಾಜ್ಯೋ ತ್ಸವವನ್ನು ಆಚರಿಸಲಾಯಿತು.

ಬಿಎಸ್‍ಪಿ ಜಿಲ್ಲಾ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿದರು. ಪಕ್ಷದ ಜಿಲ್ಲಾ ಸಂಯೋಜಕ ಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ನಿಕಟಪೂರ್ವ ತಾಲ್ಲೂಕು ಅಧ್ಯಕ್ಷರಾದ ಎಂ.ರಾಜಶೇಖರಮೂರ್ತಿ, ಎಸ್.ಪಿ.ಮಹೇಶ್ ಇದ್ದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಜತ್ತಿ, ಜಿ.ಪಂ. ಸದಸ್ಯರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ತಾ.ಪಂ. ಮಾಜಿ ಸದಸ್ಯರಾದ ಎಸ್.ರಾಜು, ಕಾಗಲವಾಡಿ ಶಿವಸ್ವಾಮಿ ಇದ್ದರು.

ನಗರದ ಎಪಿಎಂಸಿ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸ ಲಾಯಿತು. ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಬಿ.ಎಸ್. ಶಂಕರಮೂರ್ತಿ, ನಿರ್ದೇಶಕ ವಿಶ್ವನಾಥ್, ಮಾದೇವಸ್ವಾಮಿ ನಂಜುಂಡಸ್ವಾಮಿ, ವೆಂಕಟಶೇಷಪ್ಪ, ಜೆ.ಪಿ. ದೊರೆಸ್ವಾಮಿ, ಸಹಾಯಕ ನಿರ್ದೇಶಕ ಎಂ. ರವಿಚಂದ್ರ, ಕಾರ್ಯದರ್ಶಿ ಪ್ರಕಾಶ್‍ ಕುಮಾರ್, ಮಾರುಕಟ್ಟೆ ಅಧಿಕಾರಿ ಮಧುಕುಮಾರ್ ಇದ್ದರು.

ನಗರಸಭೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಉಪಾಧ್ಯಕ್ಷೆ ಸುಧಾ, ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ನಗರದ ಶ್ರೀ ರಾಮಚಂದ್ರ ವಿದ್ಯಾಸಂಸ್ಥೆಯಲ್ಲಿ 72ನೇ ಗಣರಾಜ್ಯೋ ತ್ಸವವನ್ನು ಆಚರಿಸಲಾ ಯಿತು. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಮಾದಯ್ಯ ಮಾತನಾಡಿ, ‘ನಮ್ಮ ಸಂವಿಧಾನ ಬೇರೆ ದೇಶಗಳಿಗೆ ಮಾದರಿಯಾಗಿದೆ. ಕೋವಿಡ್‌ನಿಂದ ಗಣರಾಜ್ಯೋತ್ಸವನ್ನು ಸರಳವಾಗಿ ಆಚರಣೆ ಮಾಡಲಾಗಿದೆ’ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ರುದ್ರಮೂರ್ತಿ, ಡಿ.ಇಡಿ ಕಾಲೇಜು ಪ್ರಾಂಶುಪಾಲ ಸೋಮಶೇಖರ ಬಿಸಲ್ವಾಡಿ, ಮುಖ್ಯ ಶಿಕ್ಷಕ ರಂಗಸ್ವಾಮಿ, ಶಿಕ್ಷಕರಾದ ಸಿ.ವೀರಣ್ಣ, ನರಸಿಂಹರಾಜು ಇತರರು ಇದ್ದರು.

ನಗರದ ರೋಟರಿ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಯೋಧ ಸೀತಾರಾಮ್ ಮಾತನಾಡಿದರು. ರೋಟರಿ ಅಧ್ಯಕ್ಷ ಆರ್. ರಮೇಶ್, ಕಾರ್ಯದರ್ಶಿ ಸಿ.ಎನ್. ಚಂದ್ರಪ್ರಭಾ ಜೈನ್, ರೋಟರಿ ಮಾಜಿ ಗವರ್ನರ್ ಡಾ. ನಾಗರ್ಜುನ್, ಅಸಿಸ್ಟೆಂಟ್ ಗವರ್ನರ್ ಸುಭಾಷ್, ಜಿ.ಆರ್.ಅಶ್ವತ್ಥನಾರಾಯಣ್, ಸಿ.ವಿ. ಶ್ರೀನಿವಾಸಶೆಟ್ಟಿ, ಆರ್.ಎಂ.ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.