ADVERTISEMENT

ಕಳ್ಳತನಕ್ಕೆ ಬಂದು ಕಥೆ, ಕವನ ಬರೆದ...

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 19:43 IST
Last Updated 23 ಫೆಬ್ರುವರಿ 2022, 19:43 IST
ಕಳ್ಳ ಬರೆದ ಕತೆ
ಕಳ್ಳ ಬರೆದ ಕತೆ   

ಮಳವಳ್ಳಿ: ಅಂಗನವಾಡಿ ಕೇಂದ್ರದಲ್ಲಿ ಕಳವು ಮಾಡಲು ಬಂದವನೊಬ್ಬ ಕತೆ, ಕವನ ಬರೆದು ಹೋಗಿದ್ದಾನೆ. ತನ್ನ ಬಾಲ್ಯ, ತನ್ನ ಕುಟುಂಬದ ಬಗ್ಗೆ ತನ್ನದೇ ಶೈಲಿಯಲ್ಲಿ ವರ್ಣಿಸಿದ್ದಾನೆ.

ತಾಲ್ಲೂಕಿನ ಹೆಬ್ಬಣಿ ಗ್ರಾಮದ ಅಂಗನವಾಡಿಯಲ್ಲಿ ಫೆ.2ರಂದು ಘಟನೆ ನಡೆದಿದೆ. ಅಂಗನವಾಡಿ ಸಿಬ್ಬಂದಿ ಮಂಗಳವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಬೀಗ ಮುರಿದು ಒಳನುಗ್ಗಿರುವ ಕಳ್ಳ ಬೆಲೆಬಾಳುವ ವಸ್ತುಗಳಿಗಾಗಿ ಹುಡುಕಾಟ ಮಾಡಿದ್ದಾನೆ. ಯಾವುದೇ ವಸ್ತುಗಳು ಸಿಗದಿದ್ದಾಗ ಅಲ್ಲಿಯೇ ಅನ್ನ ಮಾಡಿ, ಪುಳಿಯೊಗರೆ ತಯಾರಿಸಿ ಸೇವಿಸಿದ್ದ. ಬೀರುವಿನಲ್ಲಿದ್ದ ನೋಟ್‌ ಬುಕ್‌ ತೆಗೆದುಕೊಂಡು 3 ಪುಟದಲ್ಲಿ ಕತೆ, ಕವನ ಬರೆದಿದ್ದಾನೆ.

ADVERTISEMENT

ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪಂಡಿತಹಳ್ಳಿ ಪಿಡಿಒ ಮಹದೇವು ಪರಿಶೀಲನೆ ನಡೆಸಿದ್ದಾನೆ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.