ADVERTISEMENT

ಎಬಿವಿಪಿ; ನೂತನ ರಾಜ್ಯ ಅಧ್ಯಕ್ಷರಾಗಿ ರೋಹಿಣಾಕ್ಷ ಶಿರ್ಲಾಲು ಆಯ್ಕೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 8:47 IST
Last Updated 17 ಫೆಬ್ರುವರಿ 2022, 8:47 IST
ರೋಹಿಣಾಕ್ಷ ಶಿರ್ಲಾಲು
ರೋಹಿಣಾಕ್ಷ ಶಿರ್ಲಾಲು   

ಚಾಮರಾಜನಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ರಾಜ್ಯ ಅಧ್ಯಕ್ಷರಾಗಿ ಡಾ.ರೋಹಿಣಾಕ್ಷ ಶಿರ್ಲಾಲು ಹಾಗೂ ಕಾರ್ಯದರ್ಶಿಯಾಗಿ ಮಣಿಕಂಠ ಕಳಸ ಅವರು ಆಯ್ಕೆಯಾಗಿದ್ದಾರೆ.

ಚಾಮರಾಜನಗರದಲ್ಲಿ ನಡೆದಎಬಿವಿಪಿಯ 41ನೇ ರಾಜ್ಯ ಸಮ್ಮೇಳನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ರೋಹಿಣಾಕ್ಷ ಶಿರ್ಲಾಲು ಅವರು ಕಲಬುರ್ಗಿಯ ಕೇಂದ್ರೀಯ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಮಣಿಕಂಠ ಅವರು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ.

ಮೂರು ನಿರ್ಣಯಗಳು: ಬುಧವಾರ ಮುಕ್ತಾಯಗೊಂಡ ಎರಡು ದಿನಗಳ ರಾಜ್ಯ ಸಮ್ಮೇಳನದಲ್ಲಿ ಎಬಿವಿಪಿಯು ಮೂರು ಕರಡು ನಿರ್ಣಯಗಳನ್ನು ಅಂಗೀಕರಿಸಿದೆ.

ADVERTISEMENT

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಅವರು, ’ಕೋವಿಡ್‌ ನಂತರದ ಕಾಲಘಟ್ಟದಲ್ಲಿ ಶಿಕ್ಷಣ ವ್ಯವಸ್ಥೆ, ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಹಾಗೂ ರಾಜ್ಯದ ವರ್ತಮಾನ ಪರಿಸ್ಥಿತಿ ವಿಷಯಗಳ ಕುರಿತು ನಿರ್ಣಯಗಳನ್ನು ಅಂಗೀಕರಿಸಲಾಗಿದೆ‘ ಎಂದರು.

’ರಾಜ್ಯದ ವಿವಿಗಳ ಸ್ಥಿತಿಗತಿಗಳ ಬಗ್ಗೆ ಕೈಗೊಳ್ಳಲಾದ ನಿರ್ಣಯದಲ್ಲಿ ವಿವಿಧ ವಿವಿಗಳಲ್ಲಿ ವರದಿಯಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ‘ ಎಂದರು.

ಎಬಿವಿಪಿಯ ಜಿಲ್ಲಾ ಸಂಚಾಲಕಶ್ರುತನ್‌, ತಾಲ್ಲೂಕು ಸಂಚಾಲಕ ಶ್ರೀನಿಧಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.