ಗುಂಡ್ಲುಪೇಟೆ:‘ಸಾವರ್ಕರ್ ಹಾಗೂ ಮಹಮ್ಮದ್ ಆಲಿ ಜಿನ್ನಾ ಇಬ್ಬರೂ ಕೂಡ ನಾಸ್ತಿಕರೇ. ಅವರಿಬ್ಬರೂ ಸೇರಿ ದೇಶವನ್ನು ಈ ಸ್ಥಿತಿಗೆ ತಂದರು’ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದರು.
ಗಣೇಶೋತ್ಸವದಲ್ಲಿ ಸಾವರ್ಕರ್ ಪೋಟೊ ಇರಿಸುವ ವಿಚಾರ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಾವರ್ಕರ್ ಒಬ್ಬ ನಾಸ್ತಿಕ. ದೇವರ ಬಗ್ಗೆ ನಂಬಿಕೆ ಇರಲಿಲ್ಲ. ಅಂತಹವರನ್ನು ತೆಗೆದುಕೊಂಡು ಹೋಗಿ ನಂಬಿಕಸ್ಥರ ಜಾಗದಲ್ಲಿ ಇಡುವುದು ಹಾಸ್ಯಾಸ್ಪದ. ಅವರ ಆತ್ಮಕತೆ, ಚರಿತ್ರೆ ಓದದೇ ರಾಜಕೀಯ ಹಿತಾಸಕ್ತಿಗಾಗಿ ಮಾಡಲು ಹೋದವರಿಗೆ ಏನು ಹೇಳಬೇಕು ಎಂದು ಗೊತ್ತಾಗುವುದಿಲ್ಲ’ ಎಂದು ಕಿಡಿಕಾರಿದರು.
ಇದನ್ನೂ ಓದಿ:ಕಾಂಗ್ರೆಸ್ನವರಿಗೆ ಜಿನ್ನಾ ಮೇಲೆ ಬಲು ಪ್ರೀತಿ: ಬೊಮ್ಮಾಯಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.