ADVERTISEMENT

17 ಮಂದಿಗೆ ಸೋಂಕು, ಒಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 1:49 IST
Last Updated 15 ಆಗಸ್ಟ್ 2021, 1:49 IST

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 17 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 19 ಮಂದಿ ಸೋಂಕು ಮುಕ್ತರಾಗಿದೆ. ಹಲವು ದಿನಗಳ ನಂತರ ಒಬ್ಬರು ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ 228ಕ್ಕೆ ಏರಿದೆ. ಆರು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,200 ಮಂದಿಗೆ ಸೋಂಕು ತಗುಲಿದೆ.31,451 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಶನಿವಾರ 1,583 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,565 ಮಂದಿಯ ವರದಿ ನೆಗೆಟಿವ್ ಬಂದಿವೆ. 18 ಮಂದಿಗೆ ಸೋಂಕು ಖಚಿತವಾಗಿದೆ. ಒಂದು ಪ್ರಕರಣ ಬೇರೆ ಜಿಲ್ಲೆಗೆ ಸೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.