ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿ ಗ್ರಾಮದ ದಿವ್ಯಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಶಿವ ದೀಪೋತ್ಸವ ವಿಜೃಂಭಣೆಯಿಂದ ಜರುಗಿತು.
ಇದೇ ಸಂದರ್ಭದಲ್ಲಿ ದಿವ್ಯಲಿಂಗೇಶ್ವರನಿಗೆ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ನಡೆದವು. ತಮಿಳುನಾಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ದೇವಸ್ಥಾನದ ಸುತ್ತಲೂ ದೀಪಗಳನ್ನು ಹಚ್ಚಲಾಗಿತ್ತು. ಬಳಿಕ ದೊಡ್ಡ ದೀಪವನ್ನು ಗರಡು ಕಂಬದ ಮೇಲೆ ಇಡಲಾಗಿತ್ತು. ಈ ದೀಪವು ಬೆಳಗಿನ ವರೆಗೂ ಉರಿಯಲಿದೆ.
ಈ ಶಿವ ದೀಪೋತ್ಸವದಲ್ಲಿತಮಿಳುನಾಡಿನ ಈರೋಡ್, ಕೊಯಮತ್ತೂರು, ಪೆರಿಯಕಲ್ಲಿ ಪಟ್ಟಿ, ಮೇಟುಪಾಳ್ಯಂ, ಹರದನಹಳ್ಳಿ, ಬಂಡಿಗೇರೆ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.