ADVERTISEMENT

ಸಿದ್ಧಗಂಗಾಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 15:36 IST
Last Updated 21 ಜನವರಿ 2021, 15:36 IST
ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು
ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು   

ಚಾಮರಾಜನಗರ: ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯನ್ನು ನಗರದ ಕರಿನಂಜನಪುರ ರಸ್ತೆಯಲ್ಲಿರುವ ನಿಜಗುಣ ರೆಸಿಡೆನ್ಸಿಯಲ್ಲಿ ಆಚರಿಸಲಾಯಿತು.

ಸ್ವಾಮೀಜಿ ಅವರ ಭಾವಚಿತ್ರ ಇಟ್ಟು, ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಹಾಗೂನಮೋ ಜನ ಚೇತನ ಟ್ರಸ್ಟ್‌ನ ಅಧ್ಯಕ್ಷ ನಿಜಗುಣರಾಜು ಅವರು, ‘ನಡೆದಾಡುವ ದೇವರು, ಅಭಿನವ ಬಸವಣ್ಣ ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿ ಅವರು 111 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ, ಜನ ಮಾನಸದಲ್ಲಿ ಉಳಿದಿದ್ದಾರೆ’ ಎಂದರು.

ADVERTISEMENT

‘ಮಹಾನ್ ತಪಸ್ಸಿನ ಶಕ್ತಿ ಹೊಂದಿದ್ದ ಶ್ರೀಗಳಳುವಿಶ್ವಕ್ಕೆ ಮಾದರಿಯಾದ ದಾಸೋಹವನ್ನು ನೀಡಿದರು. ಅವರ ದರ್ಶನ ಹಾಗೂ ಆಶೀರ್ವಾದ ಪಡೆದ ನಾವು ಪುಣ್ಯವಂತರು’ ಎಂದರು.

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಸಿ.ಎಂ. ಆಶಾ, ಸದಸ್ಯ ಶಿವರಾಜು, ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಡಾ. ಪರಮೇಶ್ವರಪ್ಪ, ಮುಖಂಡರಾದ ಶಿವಕುಮಾರಸ್ವಾಮಿ, ಮಹದೇವಪ್ರಸಾದ್, ಮಂಡಲದ ಅಧ್ಯಕ್ಷ ಪ್ರಶಾಂತ್, ಪುಣ್ಯದಹುಂಡಿ ಸತೀಶ್, ಪುಣಜನೂರು ಚಂದ್ರಶೇಖರ್, ಹಂಡ್ರಕಳ್ಳಿ ನಾಗಣ್ಣ, ಕಾವುದವಾಡಿ ಗುರು, ಕಾಳನಹುಂಡಿ ಮಲ್ಲಿಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.