ADVERTISEMENT

ಮಾದಪ್ಪನ ದರ್ಶನ ಪಡೆದ ಎಸ್‌.ಎಂ.ಕೃಷ್ಣ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 11:27 IST
Last Updated 19 ಆಗಸ್ಟ್ 2019, 11:27 IST
ಎಸ್‌.ಎಂ.ಕೃಷ್ಣ ಹಾಗೂ ಕುಟುಂಬದ ಸದಸ್ಯರು ಸೋಮವಾರ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು
ಎಸ್‌.ಎಂ.ಕೃಷ್ಣ ಹಾಗೂ ಕುಟುಂಬದ ಸದಸ್ಯರು ಸೋಮವಾರ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು   

ಮಹದೇಶ್ವರ ಬೆಟ್ಟ: ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಸೋಮವಾರಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿ ಪ್ರೇಮ, ಪುತ್ರಿ ಶಾಂಭವಿ ಹಾಗೂ ಕುಟುಂಬ ವರ್ಗದವರೊಂದಿಗೆ ಮದ್ಯಾಹ್ನ 12.30ರ ವೇಳೆಗೆ ಬೆಟ್ಟಕ್ಕೆ ಬಂದ ಅವರು ಮನೆ ದೇವರು ಮಾದಪ್ಪನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ನಂತರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನಕ್ಕೆ ತೆರಳಿ ಊಟ ಮಾಡಿ, ಬೆಂಗಳೂರಿಗೆ ತೆರಳಿದರು.

ADVERTISEMENT

ಭೇಟಿ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಲು ಎಸ್‌.ಎಂ.ಕೃಷ್ಣ ಅವರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.