ಗುಂಡ್ಲುಪೇಟೆ: ತಾಲ್ಲೂಕಿನ ಅಣ್ಣೂರುಕೇರಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಘಮಾಲ ಹಾಗೂ ಪಡಗೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕಯ ಶಾಲೆ ಲಾವಣ್ಯ ರಾಜ್ಯಮಟ್ಟದ ಬಾಲಕಿಯರ ಕೊಕ್ಕೊ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಪೂರ್ವ ತಯಾರಿ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಸಿದ್ದಶೆಟ್ಟಿ, ಸಹ ಶಿಕ್ಷಕ ಮಹೇಂದ್ರಪ್ಪ, ರಂಗ ಮತ್ತು ಮನು ಮತ್ತು ಸಂತೋಷಗೆ ಶಾಲೆಯ ಪರವಾಗಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ವೃಂದ ಮತ್ತು ಎಸ್ಡಿಎಂಸಿ ಸದಸ್ಯರು ಅಭಿನಂದನೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.