ಚಾಮರಾಜನಗರ: ನಗರಸಭೆಯ 12ನೇ ವಾರ್ಡ್ನ ಕೆ.ಪಿ.ಮೊಹಲ್ಲಾದಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಎರಡು ಮಕ್ಕಳಿಗೆ ತೀವ್ರವಾಗಿ ಗಾಯಗಳಾಗಿವೆ.
ಗುರುವಾರ ಈ ಘಟನೆ ನಡೆದಿದೆ. ಆರ್ಸಲನ್ (6) ಹಾಗೂ ಯಾಸೀನ್ (3) ಗಾಯಗೊಂಡ ಮಕ್ಕಳು. ನಾಯಿಗಳ ದಾಳಿಯಿಂದಾಗಿ ಬಾಲಕನೊಬ್ಬನ ಮುಖದ ಮೇಲೆ ಆಳವಾದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ಆತನನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸ್ಥಳೀಯ ನಗರಸಭಾ ಸದಸ್ಯ ಅಬ್ರಾರ್ ಅಹಮದ್ ಅವರು, ‘ಗುರುವಾರ ಈ ಘಟನೆ ನಡೆದಿದೆ. ಮಕ್ಕಳು ಮನೆಯ ಎದುರು ಆಟವಾಡುತ್ತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿವೆ. ಒಬ್ಬ ಬಾಲಕನಿಗೆ ತೀವ್ರವಾದ ಗಾಯಗಳಾಗಿವೆ. ನಗರ ಸಭಾ ಆಯುಕ್ತರು ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ.ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ’ ಎಂದು ಹೇಳಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.