ಕೊಳ್ಳೇಗಾಲ: ತಾಲ್ಲೂಕಿನ ವೆಸ್ಲಿ ಸೇತುವೆಯ ಕಾವೇರಿ ನದಿಯಲ್ಲಿ ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಗ್ರಾಮದ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಅವರ ಶುಕ್ರವಾರ ಶವ ಪತ್ತೆಯಾಗಿದೆ.
ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತ ದೇಹ ಪತ್ತೆಯಾಗಿದೆ ಎಂಬ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ವೀಕ್ಷಣೆ ಮಾಡಿ ಈಜುಗಾರರ ಸಹಾಯದಿಂದ ಮೃತ ದೇಹವನ್ನು ನದಿಯಿಂದ ಮೇಲೆತ್ತಿದರು. ನಂತರ ಪರಿಶೀಲಿಸಿದಾಗ ಪಿಜಿ ಪಾಳ್ಯ ಗ್ರಾಮದ ಹೊಸ ಮಠದ ರಾಜಶೇಖರ ಸ್ವಾಮೀಜಿ ಎಂದು ಗೊತ್ತಾಗಿದೆ.
ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರ ಪ್ರಕಾಶ್ ಎಂಬುವರು ಸ್ಥಳಕ್ಕೆ ಬಂದು ಗುರುತಿಸಿದರು.
‘ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಆಗಾಗ ಹೊಟ್ಟೆನೋವಿನಿಂದ ನರಳುತ್ತಿದ್ದರು. 17ರಂದು ಕೊಳ್ಳೇಗಾಲಕ್ಕೆ ಹೋಗಿ ಬರುವುದಾಗಿ ಎಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಅನಾರೋಗ್ಯವಿದ್ದ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿಗೆ ಹಾರಿರಬಹುದು’ ಎಂದು ಪ್ರಕಾಶ್ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.