ADVERTISEMENT

14 ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಅಲ್ಲ

​ಪ್ರಜಾವಾಣಿ ವಾರ್ತೆ
Published 9 ಮೇ 2021, 6:25 IST
Last Updated 9 ಮೇ 2021, 6:25 IST

ಚಾಮರಾಜನಗರ: ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 9 ಗಂಟೆಯವರೆಗೆ 14 ಮಂದಿ ಮೃತಪಟ್ಟಿದ್ದಾರೆ.

ಇವರ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಅಲ್ಲ ಎಂದು ಆಮ್ಲಜನಕ ಸರಬರಾಜು ವಿಭಾಗದ ನೋಡೆಲ್‌ ಅಧಿಕಾರಿ ಡಿಸಿಎಫ್ ಏಡುಕುಂಡಲು ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುಂದಿನ 12 ಗಂಟೆಯವರೆಗೆ ಆಮ್ಲಜನಕದ ಸಂಗ್ರಹ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ನಿತ್ಯ ನಮಗೆ 4.5 ಕೆ.ಎಲ್‌ ಆಮ್ಲಜನಕ ಬೇಕಿದೆ. 400 ಆಮ್ಲಜನಕದ ಸಿಲಿಂಡರ್‌ಗಳೂ ಇವೆ. ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೂ ಈಗ ಇರುವ ಆಮ್ಲಜನಕ ಸಾಕಾಗುತ್ತದೆ. ಭಾನುವಾರ ರಾತ್ರಿಯೇ ಆಮ್ಲಜನಕ ಸರಬರಾಜಾಗುತ್ತದೆ. ಸದ್ಯಕ್ಕೆ ಚಾಮರಾಜನಗರಕ್ಕೆ ಆಮ್ಲಜನಕದ ಕೊರತೆ ಇಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.