ADVERTISEMENT

ಚಾಮರಾಜನಗರ: ನಾಲ್ವರು ಗುಣಮುಖ, 13ಕ್ಕೆ ಇಳಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 15:10 IST
Last Updated 4 ಫೆಬ್ರುವರಿ 2021, 15:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 310 ಮಂದಿಯ ಗಂಟಲು ದ್ರವದ ಮಾದರಿಗಳ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಯಾರಲ್ಲೂ ಸೋಂಕು ಕಂಡು ಬಂದಿಲ್ಲ. ನಾಲ್ವರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13ಕ್ಕೆ ಇಳಿದಿದೆ.

ಸೋಂಕಿತರ ಪೈಕಿ 10 ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 6,762 ಮಂದಿ ಗುಣಮುಖರಾಗಿದ್ದಾರೆ. 6,906 ಜನರಿಗೆ ಸೋಂಕು ತಗುಲಿದೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.