ADVERTISEMENT

31 ಮಂದಿಗೆ ಸೋಂಕು, 47 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 16:29 IST
Last Updated 27 ಜುಲೈ 2021, 16:29 IST

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 31 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 47 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಗುಣಮುಖರಾದವರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳು 210ಕ್ಕೆ ಇಳಿದಿದೆ. ಸೋಂಕಿತರಲ್ಲಿ 15 ಮಂದಿ ಐಸಿಯುನಲ್ಲಿ ಹಾಗೂ 30 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 31,759 ಪ್ರಕರಣಗಳು ವರದಿಯಾಗಿವೆ. ಗುಣಮುಖರಾದವರ ಸಂಖ್ಯೆಯೂ 31 ಸಾವಿರ ದಾಟಿದ್ದು, 31,023ಕ್ಕೆ ತಲುಪಿದೆ.

ADVERTISEMENT

ಮಂಗಳವಾರ 943 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 905 ವರದಿಗಳು ನೆಗೆಟಿವ್‌ ಬಂದಿವೆ. 38 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ನಾಲ್ಕು ಮಂದಿ ಬೇರೆ ಜಿಲ್ಲೆಗಳಿಗೆ ಸೇರಿದವರು. ಮೂವರ ವಿವರ ಪತ್ತೆ ಮಾಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.