ADVERTISEMENT

28 ಮಂದಿಗೆ ಸೋಂಕು, 14 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 15:56 IST
Last Updated 28 ಜುಲೈ 2021, 15:56 IST

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 28 ಹೊಸ ಕೋವಿಡ್‌ ಪ್ರಕರಣ ದೃಢಪಟ್ಟಿವೆ. 14 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 224ಕ್ಕೆ ಏರಿದೆ. ಸೋಂಕಿತರಲ್ಲಿ 14 ಮಂದಿ ಐಸಿಯುನಲ್ಲಿ ಹಾಗೂ 31 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 31,787ಕ್ಕೆ ಏರಿದೆ. 31,037 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಬುಧವಾರ 2,118 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,087 ಮಂದಿಯ ವರದಿ ನೆಗೆಟಿವ್‌ ಬಂದಿವೆ. 31 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಮೂರು ಪ್ರಕರಣ ಹೊರ ಜಿಲ್ಲೆಗೆ ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.