ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೇ 2ರ ರಾತ್ರಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ 24 ಮಂದಿಯ ಪೈಕಿ 13 ಜನರ ವಾರಸುದಾರರಿಗೆ ಹೆಚ್ಚುವರಿಯಾಗಿ ₹3 ಲಕ್ಷ ಪರಿಹಾರ ಧನವನ್ನು ನೀಡಲಾಗಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ನ ಸೂಚನೆಯಂತೆ 13 ಮಂದಿಯ ವಾರಸುದಾರರ ಖಾತೆಗೆ ಆರ್ಟಿಜಿಎಸ್ ಮೂಲಕ ತಲಾ ₹3 ಲಕ್ಷದಂತೆ ₹39 ಲಕ್ಷ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.