ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಮೂವರಲ್ಲಿ ಕೋವಿಡ್ ದೃಢಪಟ್ಟಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸೋಂಕಿತರ ಸಂಖ್ಯೆ 31ಕ್ಕೆ ಇಳಿದಿದೆ. ಈ ಪೈಕಿ 17 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 32,512 ಮಂದಿಗೆ ಸೋಂಕು ತಗುಲಿದೆ. 31,943 ಮಂದಿ ಗುಣಮುಖರಾಗಿದ್ದಾರೆ.
ಮಂಗಳವಾರ 842 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 839 ವರದಿ ನೆಗೆಟಿವ್ ಬಂದಿವೆ. ಹನೂರು ತಾಲ್ಲೂಕಿನ ಇಬ್ಬರು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿಗೆ ಕೋವಿಡ್ ಇರುವುದು ಖಚಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.