ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ದಾಳಿಗೆ ರೈತನೊಬ್ಬ ಪ್ರಾಣ ಕಳೆದುಕೊಂಡು ತಿಂಗಳು ಕಳೆಯುವುದರೊಳಗೆ ಮತ್ತೊಬ್ಬ ರೈತನನ್ನು ಹುಲಿಯೊಂದು ಕೊಂದಿದೆ.
ಗೋಪಾಲ ಸ್ವಾಮಿ ಬೆಟ್ಟ ವಲಯದ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯುಸುತ್ತಿದ್ದಾಗ ಶಿವಲಿಂಗಪ್ಪ (60) ಎಂಬುವರ ಮೇಲೆ ಹುಲಿ ದಾಳಿ ಮಾಡಿದೆ.
ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲೇ ಅಡಗಿದ್ದ ಹುಲಿ, ಜನರ ಗದ್ದಲ ಹೆಚ್ಚಾಗುತ್ತಿದ್ದಾಂತೆ ಜನರ ಮಧ್ಯೆ ಘರ್ಜಿಸುತ್ತ ಓಡಿತು. ಹುಲಿ ಕಾಣಿಸಿಕೊಂಡದ್ದರಿಂದ ಜನರು ಭಯಭೀತರಾಗಿ ಓಡಿದರು.
ಸ್ಥಳಕ್ಕೆ ಅರಣ್ಯಾಧಿಕಾರಿ, ಹಾಗೂ ಸಿಬ್ಬಂದಿ ಬೇಟಿ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟಸಿದರು.
ಅಧಿಕಾರಿಗಳು ಕಾಟಾಚಾರಕ್ಕೆ ಶೋಧ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.