ADVERTISEMENT

ಬಂಡೀಪುರ: ಕಾದಾಟದಲ್ಲಿ ಹುಲಿಗೆ ಗಾಯ, ಅರಣ್ಯ ಅಧಿಕಾರಿಗಳ ನಿಗಾ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:09 IST
Last Updated 20 ಅಕ್ಟೋಬರ್ 2021, 16:09 IST
ಗಾಯಗೊಂಡಿರುವ ಹುಲಿ
ಗಾಯಗೊಂಡಿರುವ ಹುಲಿ   

ಗುಂಡ್ಲುಪೇಟೆ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಗಂಜಿಕಟ್ಟೆ ಅರಣ್ಯ ಪ್ರದೇಶದ ಬಳಿ 7 ರಿಂದ 8 ವರ್ಷದ ಗಂಡು ಹುಲಿಯೊಂದು ಮತ್ತೊಂದು ಹುಲಿಯ ಜೊತೆ ನಡೆಸಿದ ಕಾದಾಟದಲ್ಲಿ ಗಾಯಗೊಂಡಿದೆ.

ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಹುಲಿ ಗಾಯಗೊಂಡಿರುವುದು ಪತ್ತೆಯಾಗಿದೆ. ತಕ್ಷಣವೇ ಅವರು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಹುಲಿಯ ಬೆನ್ನಿನ ಕೆಳಭಾಗದ ಎರಡು ಕಡೆಗಳಲ್ಲಿ ದೊಡ್ಡ ಗಾಯವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ADVERTISEMENT

‘ಗಾಯದ ಕಾರಣದಿಂದ ಹುಲಿಗೆ ಬೇಟೆಯಾಡಲು ಆಗುತ್ತಿಲ್ಲ. ಅದು ಹಸಿವು ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದೆ. ಹುಲಿಯು ಚೇತರಿಸಿಕೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಅದರ ಚಲನವಲನಗಳ ಮೇಲೆ ನಿಗಾ ಇಡುವುದಕ್ಕಾಗಿ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಲಾಗಿದೆ. ಸಿಬ್ಬಂದಿ ಅದರ ಮೇಲೆ ನಿಗಾ ಇಡಲಿದ್ದಾರೆ. ಒಂದು ವೇಳೆ ಹುಲಿಯು ಚೇತರಿಸಿಕೊಳ್ಳದೇ ಇದ್ದಲ್ಲಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಕ್ರಮವಹಿಸಲಾಗುವುದು’ ಎಂದುಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.