ADVERTISEMENT

ಪುನೀತ್ ರಾಜ್‌ಕುಮಾರ್ ಸ್ಮರಣೆ: ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2021, 4:48 IST
Last Updated 30 ಅಕ್ಟೋಬರ್ 2021, 4:48 IST
ಚಾಮರಾಜನಗರದಲ್ಲಿ ಹೋಟೆಲ್, ದಿನಸಿ ಅಂಗಡಿಗಳು ಸೇರಿದಂತೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಚಾಮರಾಜನಗರದಲ್ಲಿ ಹೋಟೆಲ್, ದಿನಸಿ ಅಂಗಡಿಗಳು ಸೇರಿದಂತೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ.   

ಚಾಮರಾಜನಗರ: ನಟ ಪುನೀತ್ ರಾಜ್‌ಕುಮಾರ್ ಗೌರವಾರ್ಥ ಚಾಮರಾಜನಗರದಲ್ಲಿ ಜನರು ಸ್ವಯಂ ಪ್ರೇರಿತ ಬಂದ್ ಕೈಗೊಂಡಿದ್ದಾರೆ.

ಹೋಟೆಲ್, ದಿನಸಿ ಅಂಗಡಿಗಳು ಸೇರಿದಂತೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜನರ ಓಡಾಟವೂ ಕಡಿಮೆ ಇದೆ. ವೃತ್ತಗಳು, ಪ್ರಮುಖ ರಸ್ತೆಗಳಲ್ಲಿ ಪುನೀತ್ ಅವರ ಭಾವಚಿತ್ರ ಅಳವಡಿಸಿ ಶ್ರದ್ಧಾಂಜಲಿ ಸಭೆಗೆ ಸಿದ್ಧತೆ ಮಾಡಲಾಗುತ್ತಿದೆ.

ಔಷಧ ಅಂಗಡಿಗಳು, ಆಸ್ಪತ್ರೆ ಕ್ಲಿನಿಕ್ ಗಳು, ಸರ್ಕಾರಿ ಕಚೇರಿಗಳು ತೆರೆದಿವೆ.

ADVERTISEMENT

ಶನಿವಾರ ಬೆಳಿಗ್ಗೆಯೂ ಪುನೀತ್ ಅಭಿಮಾನಿಗಳು ಅವರ ಭಾವಚಿತ್ರ ಹಿಡಿದು ಬೈಕ್ ರ್ಯಾಲಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.