ADVERTISEMENT

ಚಾಮರಾಜನಗರ: 22 ಹೊಸ ಪ್ರಕರಣ, 28 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 13:47 IST
Last Updated 31 ಅಕ್ಟೋಬರ್ 2020, 13:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 28 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 22 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 5,964 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 5,613 ಮಂದಿ ಗುಣಮುಖರಾಗಿದ್ದಾರೆ. 228 ಸಕ್ರಿಯ ಪ್ರಕರಣಗಳಿವೆ. 115 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 42 ಮಂದಿ ಐಸಿಯುನಲ್ಲಿದ್ದಾರೆ.104 ಮಂದಿ ಕೋವಿಡ್‌ನಿಂದಾಗಿ ಹಾಗೂ 19 ಮಂದಿ ಬೇರೆ ಅನಾರೋಗ್ಯಗಳಿಂದಾಗಿ ಮೃತಪಟ್ಟಿದ್ದಾರೆ.

ಶನಿವಾರ 992 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 973 ಮಂದಿಯ ವರದಿ ನೆಗೆಟಿವ್‌ ಬಂದಿವೆ. 19 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದರೆ, ಮೂರು ಪ್ರಕರಣಗಳು ಮೈಸೂರಿನಲ್ಲಿ ಖಚಿತವಾಗಿದೆ.

ADVERTISEMENT

ಸೋಂಕು ದೃಢಪಟ್ಟವರಲ್ಲಿ ಚಾಮರಾಜನಗರ ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆಯ ಏಳು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಆರು ಮಂದಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.