ADVERTISEMENT

22 ಹೊಸ ಪ್ರಕರಣ, 27 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 16:14 IST
Last Updated 12 ಆಗಸ್ಟ್ 2021, 16:14 IST

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 22 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿವೆ. 27 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

236 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಲ್ಲಿ ಆರು ಮಂದಿ ಐಸಿಯುನಲ್ಲಿದ್ದಾರೆ. 26 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,161ಕ್ಕೆ ಏರಿದ್ದು, 31,395 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಗುರುವಾರ 1,841 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,818 ಮಂದಿಯ ವರದಿ ನೆಗೆಟಿವ್ ಬಂದಿವೆ. 23 ಮಂದಿಗೆ ಸೋಂಕು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.