ADVERTISEMENT

22 ಹೊಸ ಪ್ರಕರಣ, 20 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 15:12 IST
Last Updated 8 ಆಗಸ್ಟ್ 2021, 15:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 22 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 20 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

240 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ ಏಳು ಮಂದಿ ಐಸಿಯುನಲ್ಲಿದ್ದು, 23 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ ಹಾಗೂ ಕೇರ್‌ ಕೇಂದ್ರಗಳಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,075ಕ್ಕೆ ಏರಿಕೆಯಾಗಿದೆ. ಪ್ರಕರಣಗಳು ವರದಿಯಾಗಿವೆ. 31,305 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಭಾನುವಾರ 1,399 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,377 ವರದಿಗಳು ನೆಗೆಟಿವ್‌ ಬಂದಿವೆ. 22 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.