ADVERTISEMENT

ಈಜಲು ಹೋದ ಇಬ್ಬರು ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 15:42 IST
Last Updated 5 ಏಪ್ರಿಲ್ 2020, 15:42 IST

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ಹೊರವಲಯದಲ್ಲಿರುವ ಎಣ್ಣೆಹೊಳೆ ಕೆರೆಯಲ್ಲಿ ಭಾನುವಾರ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮೃತಪಟ್ಟಿದ್ದಾರೆ.

ನಗರದ ಗಾಳೀಪುರ ಬಡಾವಣೆಯ ನಿವಾಸಿಗಳಾದ ಸೈಯದ್ (17) ಹಾಗೂ ಶಾರನ್ (17) ಮೃತಪಟ್ಟವರು.

ಐದಾರು ಮಂದಿ ಸ್ನೇಹಿತರು ಭಾನುವಾರ ಮಧ್ಯಾಹ್ನ ಕೆರೆಗೆ ಈಜಲು ಹೋಗಿದ್ದರು. ಸೈಯದ್‌ ಹಾಗೂ ಶಾರನ್‌ ಅವರು ಈಜುವುದಕ್ಕಾಗಿ ಕೆರೆಗೆ ಇಳಿದವರು ಮೇಲೆ ಬರಲೇ ಇಲ್ಲ. ನೀರು ಕಡಿಮೆ ಇದ್ದುದರಿಂದ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಈ ಸ್ನೇಹಿತರು ಆಗಾಗ ಈಜಾಡಲು ಹೋಗುತ್ತಿದ್ದರು ಎಂದು ಗೊತ್ತಾಗಿದೆ.

ಮಾತಿನ ಚಕಮಕಿ: ಬಾಲಕರ ಜೊತೆಗೆ ಹೋಗಿದ್ದವರು ವಿಷಯ ತಿಳಿಸಿದಾಗ ಅಮಚವಾಡಿ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿ ಸ್ಥಳಕ್ಕೆ ಬಂದರು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ವಿಡಿಯೊ ಮಾಡುತ್ತಿದ್ದರು. ಇದಕ್ಕೆ ಮೃತರ ಸಂಬಂಧಿಗಳು, ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಜೆ.ಮೋಹನ್‌, ಇನ್‌ಸ್ಪೆಕ್ಟರ್‌ ಮಂಜು, ಸಬ್‌ ಇನ್‌ಸ್ಪೆಕ್ಟರ್‌ ಲೋಹಿತ್‌ ಕುಮಾರ್‌ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಶವಗಳನ್ನು ಮೇಲೆತ್ತಿದರು.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.