ಸಂತೇಮರಹಳ್ಳಿ: ಇಲ್ಲಿಗೆ ಸಮೀಪದ ಹೆಗ್ಗವಾಡಿಪುರ ಗೇಟ್ ಬಳಿ ಶನಿವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಮುಳ್ಳುಹಂದಿ ಮೃತಪಟ್ಟಿದೆ.
ಸ್ವಲ್ಪ ಹೊತ್ತಿನ ನಂತರ ಆ ಸ್ಥಳದಿಂದ ಮುಳ್ಳು ಹಂದಿಯ ಕಳೇಬರ ನಾಪತ್ತೆಯಾಗಿತ್ತು. ಯಾರು ಎಲ್ಲಿಗೆ ತೆಗೆದುಕೊಂಡು ಹೋದರು ಎಂಬುದು ಗೊತ್ತಾಗಲಿಲ್ಲ.
‘ವಾಹನ ಡಿಕ್ಕಿ ಹೊಡೆದು ಮುಳ್ಳುಹಂದಿ ಸತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.