
ಪ್ರಜಾವಾಣಿ ವಾರ್ತೆ
ಯಳಂದೂರು: ತಾಲ್ಲೂಕಿನ ಮೆಲ್ಲಹಳ್ಳಿ ಕಸ್ತೂರಬಾ ಗಾಂಧಿ ವಸತಿ ಶಾಲೆ ಮಿಷನ್ ಪ್ರಕೃತಿ ಯೋಜನೆಯಡಿ ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದುಕೊಂಡಿದೆ.
ಪರಿಸರ ಜಾಗೃತಿ, ಹಸಿರು ಚಟುವಟಿಕೆ, ತ್ಯಾಜ್ಯ ವಿಲೇವಾರಿ ಮತ್ತಿತರ ಪರಿಸರಸ್ನೇಹಿ ಕೆಲಸಗಳಲ್ಲಿ ಸಕ್ರಿಯ ಮಕ್ಕಳ ಭಾಗವಹಿಸುವಿಕೆ ಹಾಗೂ ಪ್ರಾಯೋಗಿಕ ಚಟುವಟಿಕೆಯಲ್ಲಿ ತೊಡಗುವ ಶಾಲೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಮಿಷನ್ ಪ್ರಕೃತಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಲೆಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಶಿಕ್ಷಕಿ ಉಮ್ಮೆಸಲ್ಮಾ ಹಾಗೂ ಮಕ್ಕಳು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.