ADVERTISEMENT

ಚಾಮರಾಜನಗರ: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 15:58 IST
Last Updated 29 ಸೆಪ್ಟೆಂಬರ್ 2021, 15:58 IST
ಕುಮಾರ್‌
ಕುಮಾರ್‌   

ಚಾಮರಾಜನಗರ: ನಗರದ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿಗೆ, ತಲೆ ಕೊಟ್ಟು ವ್ಯಕ್ತಿಯೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ಕೊಡಸೋಗೆ ಗ್ರಾಮದ ಕುಮಾರ್‌ (28) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

ಬುಧವಾರ ಬೆಳಿಗ್ಗೆ 7 ಗಂಟೆಗೆ ಮೈಸೂರಿಗೆ ತೆರಳುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಮೈಸೂರಿನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.