ADVERTISEMENT

ಬೈಕ್‌ ಅಪಘಾತ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 15:39 IST
Last Updated 3 ಏಪ್ರಿಲ್ 2020, 15:39 IST

ಚಾಮರಾಜನಗರ: ತಾಲ್ಲೂಕಿನ ಅಂಕನಶೆಟ್ಟಿಪುರದ ಬಳಿ ಗುರುವಾರ ರಾತ್ರಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಂಗಲವಾಡಿ ಗ್ರಾಮದ ರಘು (25) ಮೃತಪಟ್ಟವರು. ವೃತ್ತಿಯಲ್ಲಿ ಚಾಲಕರಾಗಿರುವ ರಘು ಅವರು ಗುರುವಾರ ರಾತ್ರಿ ಬೈಕ್‌ನಲ್ಲಿ ಹೊಂಗಲವಾಡಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

‘ಬೈಕ್‌ನಲ್ಲಿ ಅತ್ಯಂತ ವೇಗವಾಗಿ ಹೋಗುತ್ತಿದ್ದ ರಘು ಅವರು ಅಂಕನಶೆಟ್ಟಿಪುರದಲ್ಲಿ ಮಾನಸಿಕ ಅಸ್ವಸ್ಥರೊಬ್ಬರಿಗೆ ಡಿಕ್ಕಿ ಹೊಡೆದು ಬೈಕ್‌ ಸಮೇತ ಬಿದ್ದಿದ್ದಾರೆ. ತಲೆಗೆ ತೀವ್ರ ಏಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ರಾಜುನಾಯಕ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಮಾನಸಿಕ ಅಸ್ವಸ್ಥನ ಎರಡು ಕಾಲುಗಳ ಮೂಳೆ ಮುರಿದಿದೆ. ತಲೆಗೂ ಏಟಾಗಿದೆ. ಆದರೆ, ಪ್ರಾಣಕ್ಕೆ ಏನೂ ಅಪಾಯವಾಗಿಲ್ಲ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.