ADVERTISEMENT

ಮಹದೇಶ್ವರ ಬೆಟ್ಟ: ಶನಿವಾರದಿಂದ ಸರಳ ಯುಗಾದಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 4:47 IST
Last Updated 10 ಏಪ್ರಿಲ್ 2021, 4:47 IST
ದೇವಾಲಯದ ಆವರಣದಲ್ಲಿ ರಥವನ್ನು ನಿಲ್ಲಿಸಿರುವುದು
ದೇವಾಲಯದ ಆವರಣದಲ್ಲಿ ರಥವನ್ನು ನಿಲ್ಲಿಸಿರುವುದು   

ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆ ಶನಿವಾರದಿಂದ (ಏ.10) ಆರಂಭವಾಗಲಿದ್ದು, ಕೋವಿಡ್‌ ಕಾರಣಕ್ಕೆ ಸರಳವಾಗಿ ನಡೆಯಲಿದೆ.

ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಸೇರಿದಂತೆ 200 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ನಾಲ್ಕು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕವಲ್ಲದೆ ತಮಿಳುನಾಡಿನ ಲಕ್ಷಾಂತರಭಕ್ತರು ಪ್ರತಿ ವರ್ಷ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷವೂ ಜಾತ್ರೆ ರದ್ದಾಗಿತ್ತು.

ADVERTISEMENT

ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನದ ಸೇವೆ, ಭಾನುವಾರ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.

ಕೊನೆಯ ದಿನ ರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳುವುದು ವಾಡಿಕೆ. ಅದರ ಪ್ರಕಾರ ಮಂಗಳವಾರ (ಏ.13) ರಥೋತ್ಸವ ಬರುತ್ತದೆ. ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ರತೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ದೇವಾಲಯದ ಎದುರು ರಥವನ್ನು ತಂದು ನಿಲ್ಲಿಸಲಾಗಿದೆ.

ಈ ಬಗ್ಗೆ ಶನಿವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.