ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ಮೂರು ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಿದವರು ಹಾಗೂ ಸಲ್ಲಿಸಬೇಕಾದವರು ಎಲ್ಲರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ನಡುವೆ ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆ ತಡೆಯುವ ಸಲುವಾಗಿ ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸಹ ಸ್ಥಾಪಿಸಿದೆ.
ಕಿಂಚಿತ್ತೂ ನಿರಾಸಕ್ತಿ, ನಿರ್ಲಕ್ಷ್ಯ ತೋರದಂತೆ ಅಬಕಾರಿ ಇಲಾಖೆಗೆ ಜಿಲ್ಲಾ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ.
‘ಅಕ್ರಮ ಮದ್ಯ ತಡೆಗಾಗಿ ಅರಣ್ಯ, ಪ್ರಾದೇಶಿಕ ಸಾರಿಗೆ ಇಲಾಖೆ, ಕಂದಾಯ ಇಲಾಖೆ, ಗಣಿ, ಭೂ ವಿಜ್ಞಾನ ಇಲಾಖೆ ಸಹಕಾರ ಪಡೆದಿದ್ದೇವೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ತಿಳಿಸಿದ್ದಾರೆ.
‘ತೀವ್ರ ಅನಿವಾರ್ಯ ಕಾರಣದಲ್ಲಿ ಅಧಿಕಾರಿಗೆ ರಜೆ ನೀಡಬೇಕು. ಯಾವ ಕಾರಣಕ್ಕೂ ಮೊಬೈಲ್ ಸ್ವಿಚ್ ಆಫ್ ಮಾಡಬಾರದು ಎಂದು ಸೂಚನೆ ಸಹ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.