ADVERTISEMENT

ಎಚ್‌ಡಿಕೆ ಸ್ಪರ್ಧಿಸಿದರೂ ಹೆದರಲ್ಲ: ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2014, 9:50 IST
Last Updated 17 ಮಾರ್ಚ್ 2014, 9:50 IST

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್‌.ಡಿ.­ಕುಮಾರ­ಸ್ವಾಮಿ ಬಂದು ಸ್ಪರ್ಧಿಸಿದರೂ ಹೆದರಲ್ಲ ಎಂದು ಚಿಕ್ಕಬಳ್ಳಾಪುರ ಲೋಕ­ಸಭಾ ಕ್ಷೇತ್ರದ ಬಿಜೆಪಿ  ನಿಯೋಜಿತ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಭಾನು­ವಾರ ಹೇಳಿದರು.  ಪಟ್ಟಣದಲ್ಲಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಚೇರಿ ಉದ್ಘಾಟಿಸಿ, ಜಾತಿ ಧರ್ಮ ಆಧಾರದ ಮೇಲೆ ಮತ ಕೇಳಲು ಬಂದಿಲ್ಲ.

ಕಳೆದ ಚುನಾವಣೆ­ಯಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ 18 ಭರವಸೆಗಳನ್ನು ನೀಡಿ­ದ್ದರು. ಆದರೆ ಅಧಿಕಾರ ಅವಧಿಯಲ್ಲಿ ಕನಿಷ್ಠ ಪಕ್ಷ ಒಂದೂ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿದೆ. ಜನರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು­ಕೊಂಡು ಚುನಾವಣೆ ಎದುರಿ­ಸುತ್ತೇನೆ ಎಂದರು.

ಬಿಜೆಪಿ  ಹಿರಿಯ ಮುಖಂಡರಾದ ಅಂಜಿನಪ್ಪ ಲಕ್ಷ್ಮೀಪತಿರೆಡ್ಡಿ, ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಚೌಡರೆಡ್ಡಿ, ಬಿಜೆಪಿ ಮಂಡಲ ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿ­ಕಾರ್ಜು­ನರೆಡ್ಡಿ, ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾಬಾಯಿ, ಜಿಲ್ಲಾ ಕಾರ್ಯ­ದರ್ಶಿ ಮಂಜುಳಾ, ಜಿಲ್ಲಾ ಮಹಿಳಾ ಘಟಕ ಸದಸ್ಯೆ ಮಂಜುಳಮ್ಮ, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಜಿ.ವಿ.ಕೃಷ್ಣಯ್ಯ, ಮುಖಂಡರಾದ ಪಿ.ವೆಂಕಟ­ರಾಯಪ್ಪ, ಚೇಳೂರು ಚಂದ್ರಣ್ಣ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.