ADVERTISEMENT

ಎರಡು ಕಡೆ ಮತದಾನ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 13 ಮೇ 2018, 4:54 IST
Last Updated 13 ಮೇ 2018, 4:54 IST
ಬಾಗೇಪಲ್ಲಿ ತಾಲ್ಲೂಕಿನ ಗುಂತೂರುಪಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಬಾಗೇಪಲ್ಲಿ ತಾಲ್ಲೂಕಿನ ಗುಂತೂರುಪಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.   

ಚೇಳೂರು/ ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ರೂರಲ್ ಗುಡಿಬಂಡೆ ಮತ್ತು ಬಾಗೇಪಲ್ಲಿ ತಾಲ್ಲೂಕಿನ ಗುಂತೂರುಪಲ್ಲಿ ಗ್ರಾಮಸ್ಥರು ಬೆಳಿಗ್ಗೆ ಕೆಲ ಹೊತ್ತು ಮತದಾನ ಬಹಿಷ್ಕರಿಸಿದರು. ಬಳಿಕ ಅಧಿಕಾರಿಗಳ ಮನವೊಲಿಕೆ ನಂತರ ಮತ ಚಲಾಯಿಸಿದರು.

ರೂರಲ್ ಗುಡಿಬಂಡೆ ಗ್ರಾಮಸ್ಥರು ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಹಾಯಕ ಚುನಾವಣಾಧಿಕಾರಿ ಮುನಿರಾಜು ಅವರ ಮನವೊಲಿಕೆಯ ನಂತರ ಗ್ರಾಮಸ್ಥರು ಮತದಾನ ಮಾಡಲು ಒಪ್ಪಿದರು.

ಗುಂತೂರುಪಲ್ಲಿ ಗ್ರಾಮಸ್ಥರು ಮತದಾನ ಕೇಂದ್ರ ಬದಲಾಯಿಸುವಂತೆ ಒತ್ತಾಯಿಸಿ ಮತದಾನ ಬಹಿಷ್ಕರಿಸಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಗ್ರಾಮದಲ್ಲಿ ಮತಗಟ್ಟೆ ತೆರೆಯುತ್ತಾರೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಒಂದೂವರೆ ಕಿ.ಮೀ ದೂರದಲ್ಲಿರುವ ನಲ್ಲಗುಟ್ಲಪಲ್ಲಿಗೆ ನಡೆದುಕೊಂಡು ಹೋಗಿ ಮತ ಚಲಾಯಿಸಬೇಕು. ನಮಗೆ ನಮ್ಮ ಊರಿನಲ್ಲೇ ಮತಗಟ್ಟೆ ಸ್ಥಾಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ADVERTISEMENT

ಬೆಳಿಗ್ಗೆ 10.30ರ ಸುಮಾರಿಗೆ ಸಹಾಯಕ ಚುನಾವಣಾಧಿಕಾರಿ ಅವರು ಗ್ರಾಮಕ್ಕೆ ಭೇಟಿ ನೀಡಿ ಮುಂದಿನ ಚುನಾವಣೆ ಒಳಗೆ ನಿಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಬಳಿಕ ಗುಂತೂರುಪಲ್ಲಿ ಜನರು ಮತದಾನಕ್ಕೆ ಮುಂದಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.