ADVERTISEMENT

ಗೌರಿಬಿದನೂರು: ತಾಲ್ಲೂಕಿನಾದ್ಯಂತ ಬಿರುಸಿನ ಮತದಾನ

​ಪ್ರಜಾವಾಣಿ ವಾರ್ತೆ
Published 13 ಮೇ 2018, 4:52 IST
Last Updated 13 ಮೇ 2018, 4:52 IST

ಗೌರಿಬಿದನೂರು: ತಾಲ್ಲೂಕಿನಾದ್ಯಂತ ವಿಧಾನಸಭಾ ಚುನಾವಣೆಯಲ್ಲಿ ಬಿರುಸಿ ನಿಂದ ಮತದಾನ ನಡೆಯಿತು. ಬೆಳಿಗ್ಗೆಯಿಂದಲೇ ಮತದಾನಕ್ಕಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದರು.

ಬೆಳಿಗ್ಗೆ ಮತದಾನ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದರೂ, ಬಿಸಿಲೇರುತ್ತಿದ್ದಂತೆ ಏರಿಕೆಯಾಯಿತು. ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್.ಎಚ್.ಶಿವಶಂಕರರೆಡ್ಡಿ ತಮ್ಮ ಸ್ವಗ್ರಾಮ ನಾಗಸಂದ್ರದಲ್ಲಿ ಮತ ಹಾಕಿದರು.

ಜೆಡಿಎಸ್ ಅಭ್ಯರ್ಥಿ ಸಿ.ಆರ್. ನರಸಿಂಹಮೂರ್ತಿ ಚಂದನದೂರು ಮತಗಟ್ಟೆಯಲ್ಲಿ ಪತ್ನಿ ಜೊತೆ ಹೋಗಿ ಮತ ಚಲಾಯಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಮಂಜುನಾಥರೆಡ್ಡಿ ಚೀಗಟಗೆರೆಯಲ್ಲಿ ಮತದಾರರೊಂದಿಗೆ ಸಾಲಿನಲ್ಲಿ ನಿಂತು ಮತ ಹಾಕಿದರು.

ADVERTISEMENT

ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ರೋಷನ್ ಅಬ್ಬಾಸ್ ಅಲೀಪುರದಲ್ಲಿ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.