ಬಾಗೇಪಲ್ಲಿ: ತಾಲ್ಲೂಕಿನ ಕೊಳ್ಳೋರಪಲ್ಲಿ ಗ್ರಾಮದಲ್ಲಿ ಬುಧವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಬ್ಬಾರೆಡ್ಡಿ, ತಾಲ್ಲೂಕಿನ ರಸ್ತೆ, ಶಿಕ್ಷಣ, ಬೀದಿದೀಪ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ₨ 100 ಕೋಟಿ ಮೊತ್ತದ ಯೋಜನೆ ಜಾರಿಯಾಗಲಿದೆ ಎಂದರು.
ಶಾಸಕರು ಕ್ಷೇತ್ರದ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಿಲ್ಲ ಎಂದು ಕೆಲ ರಾಜಕೀಯ ವಿರೋಧಿಗಳು ಆರೋಪಿಸುತ್ತಿದ್ದಾರೆ. ನಾನು ಆಯ್ಕೆಯಾಗಿ ಕೇವಲ 7 ತಿಂಗಳಾಗಿದೆ. 2 ಬಾರಿ ಅಧಿವೇಶನದಲ್ಲಿ ಭಾಗವಹಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಕುರಿತು ಒಂದು ಪಟ್ಟಿ ಸಿದ್ಧಪಡಿಸಿದ್ದು ಅದರಂತೆ ಕಾರ್ಯನಡೆಸುತ್ತಿದ್ದೇನೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಮಾತನಾಡಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿ.ಶ್ರೀನಿವಾಸ್, ಸರ್ಕಲ್ ಇನ್ಸ್ಪೆಕ್ಟರ್ ಸಿ.ವಸಂತ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಪಿ.ವಿ.ನಾಗಪ್ಪ, ಪಾತಪಾಳ್ಯ ಸಬ್ ಇನ್ಸ್ ಪೆಕ್ಟರ್ ಎಂ.ಆರ್.ನಟರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಅಶ್ವತ್ಥಪ್ಪ, ಮುಖಂಡರಾದ ಚೆಂಡೂರು ವೆಂಕಟೇಶ್, ಶ್ರೀನಿವಾಸರೆಡ್ಡಿ, ವೆಂಕಟರಾಮರೆಡ್ಡಿ, ರೆಡ್ಡಪ್ಪ, ಸೋಮಶೇಖರ, ರಘುನಾಥರೆಡ್ಡಿ, ಅಮರನಾಥರೆಡ್ಡಿ, ಜಮೀರ್, ಯೋಗೇಶ್, ಎಸ್.ಎನ್.ವೆಂಕಟರಮಣರೆಡ್ಡಿ ಇತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.