ADVERTISEMENT

ಬಸ್‌ಗಳ ಕೊರತೆ: ಟಾಪ್ ಪ್ರಯಾಣ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2011, 11:05 IST
Last Updated 10 ಸೆಪ್ಟೆಂಬರ್ 2011, 11:05 IST

ಗೌರಿಬಿದನೂರು:  ಪಟ್ಟಣದಲ್ಲಿ ಸೂಕ್ತ ರೀತಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರು ಬಸ್‌ಗಳ ಟಾಪ್ ಮೇಲೆ ಕುಳಿತು ಪ್ರಯಾಣಿಸ ಬೇಕಾದ ಅನಿವಾರ್ಯತೆ ನಿರ್ಮಾಣ ಆಗಿದೆ.

ನಗರಗೆರೆ, ವಾಟದಹೊಸಹಳ್ಳಿ, ಯಲ್ಲೋಡು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಈ ಪ್ರಯಾಣ ಸಾಮಾನ್ಯ. ಬಸ್ ವೇಗವಾಗಿ ಸಂಚರಿಸುವಾಗ ಆಯ ತಪ್ಪಿ ಬೀಳುವ ಅಪಾಯ ಇದ್ದರೂ ಪ್ರಯಾಣ ಮುಂದುವರೆದಿದೆ.

`ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ಒಂದೇ ಬಸ್ ಹೊರಡುವುದರಿಂದ ಖಾಸಗಿ ಬಸ್ ಸೇವೆ ಅನಿವಾರ್ಯ ವಾಗಿದೆ. ಆತಂಕದಲ್ಲಿ  ಪ್ರತಿದಿನ ಸಂಚರಿಸಬೇಕಿದೆ.   ಇದಕ್ಕೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎನ್ನುತ್ತಾರೆ ವಿದ್ಯಾರ್ಥಿ ಮಹೇಶ್.

`ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬೆಳಿಗ್ಗೆ 8 ರಿಂದ 10 ಗಂಟೆ ಸಮಯ ದಲ್ಲಿ ಕನಿಷ್ಠ ಮೂರು ಬಸ್‌ಗಳು ಸಂಚರಿಸಿದರೆ ಅನುಕೂಲವಾಗು ತ್ತದೆ.  ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ  ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎನ್ನವುದು ವಿದ್ಯಾರ್ಥಿಗಳಾದ ಅನಿಲ್‌ಕುಮಾರ್, ನವೀನ್‌ಕುಮಾರ್ ಒತ್ತಾಯಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.