ADVERTISEMENT

ಮತದಾನ ಜಾಗೃತಿಗೆ ಮಾನವ ಸರಪಳಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 10:42 IST
Last Updated 22 ಮಾರ್ಚ್ 2014, 10:42 IST

ದೊಡ್ಡಬಳ್ಳಾಪುರ:  ನಗರದಲ್ಲಿ ಮತ­ದಾನದ ಬಗ್ಗೆ ಜಾಗೃತಿ ಮೂಡಿಸುವ ಸಲು­ವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿ­ಕೊಳ್ಳಲಾಗಿತ್ತು. ನಗರದ ಸರ್ಕಾರಿ ಪ.ಪೂ. ಕಾಲೇಜಿನ ಬಳಿಯಿಂದ ಮೆರ­ವಣಿಗೆ ನಡೆಸಿದ ನೂರಾರು ವಿದ್ಯಾರ್ಥಿ­ಗಳು ಹಾಗೂ ಅಂಗನವಾಡಿ ಕಾರ್ಯ­ಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.

ತಾಲ್ಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಮತದಾನದ ಬಗ್ಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ಹಿಡಿದ ವಿದ್ಯಾರ್ಥಿಗಳು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ­ಹಣಾ­ಧಿಕಾರಿ ಹಾಗೂ ಸ್ವೀಪ್ ಸಮಿ­ತಿಯ ಅಧ್ಯಕ್ಷ ಎನ್.ಕೃಷ್ಣಪ್ಪ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಮತ­ದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದರೊಂದಿಗೆ ಕಡ್ಡಾ­ಯ­ವಾಗಿ ಪ್ರತಿಯೊಬ್ಬ ಮತದಾರರು ಮತದಾನದಲ್ಲಿ ಭಾಗವಹಿಸಬೇಕಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳ­ಲಾಗುತ್ತಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ­ಕೊಳ್ಳಲು ಶಿಬಿರಗಳನ್ನು ಏರ್ಪಡಿಸಿದ್ದು, ಹೊಸ ಮತದಾರರು ಅರ್ಜಿ ಸಲ್ಲಿಸಿ­ದ್ದಾರೆ. ಮತದಾರರು ಮತದಾನದ ದಿನ ಕಾಲಹರಣ ಮಾಡದೆ ಕಡ್ಡಾಯ­-ವಾಗಿ ಮತ ಚಲಾಯಿಸಬೇಕಿದೆ. ಮತ­ದಾನ ಪ್ರಜಾಪ್ರಭುತ್ವದಲ್ಲಿ ಒಂದು ಪವಿತ್ರ ಕರ್ತವ್ಯ ಎಂದು ಭಾವಿಸಬೇಕಿದೆ ಎಂದು ಮತದಾನದ ಮಹತ್ವ ಕುರಿತು ವಿವರಿಸಿದರು. ಮತದಾನಕ್ಕೆ ವಿದ್ಯಾರ್ಥಿ­ಗಳು ಪೋಷಕರನ್ನು ಪ್ರೇರೇಪಿಸಿ ಕರೆ ತರುವಂತೆ ಕರೆ ನೀಡಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿ­ಕಾರಿ ಕೆ.ಅಶ್ವತ್ಥ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.­ತಿಮ್ಮೇ­ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.