ADVERTISEMENT

ಮತ ಹಾಕಿ ಸಂವಿಧಾನದ ಆಶಯ ಗಟ್ಟಿಗೊಳಿಸಿ

ಎಸ್‌ಜೆಸಿಐಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಶಿವಸ್ವಾಮಿ ಅಭಿಮತ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 8:48 IST
Last Updated 28 ಏಪ್ರಿಲ್ 2018, 8:48 IST

ಚಿಕ್ಕಬಳ್ಳಾಪುರ: ‘ಯುವ ಶಕ್ತಿ ದೇಶದ ಸಂಪತ್ತು. ಕಾಲೇಜು ವಿದ್ಯಾರ್ಥಿಗಳು ಇದನ್ನು ಅರಿತು ಕಡ್ಡಾಯವಾಗಿ ಮತ ದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಂವಿಧಾನದ ಆಶಯ ಗಟ್ಟಿಗೊಳಿಸಬೇಕು’ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವ ಣಾಧಿಕಾರಿ ಶಿವಸ್ವಾಮಿ ತಿಳಿಸಿದರು.

ನಗರದ ಹೊರವಲಯದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಬಿಜಿಎಸ್ ನಿರ್ವಹಣಾ (ಬಿಜಿಎಸ್‍ಐಎಂಎಸ್)ವಿಭಾಗದಿಂದ ‘ಬಾನ್‍ವವೊಯೇಜ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಎನ್‌.ಶಿವರಾಮರೆಡ್ಡಿ, ನಗರಸಭೆ ಆಯುಕ್ತ ಉಮಾಕಾಂತ್, ಕಾಲೇಜಿನ ಪ್ರಾಂಶುಪಾಲ ಬಿ.ಆರ್‌.ವೆಂಕಟೇಶ್‌ಬಾಬು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.