ADVERTISEMENT

ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2014, 8:47 IST
Last Updated 25 ಮಾರ್ಚ್ 2014, 8:47 IST
ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ದಲಿತರ ಕಾಲೊನಿ ನಿವಾಸಿಗಳು, ಕರ್ನಾಟಕ ಮಾದಿಗ ದಂಡೋರ ಕಾರ್ಯಕರ್ತರು ಸೋಮವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ದಲಿತರ ಕಾಲೊನಿ ನಿವಾಸಿಗಳು, ಕರ್ನಾಟಕ ಮಾದಿಗ ದಂಡೋರ ಕಾರ್ಯಕರ್ತರು ಸೋಮವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.   

ಗೌರಿಬಿದನೂರು: ತಾಲ್ಲೂಕಿನ ಅಲಿಪುರ ಗ್ರಾಮದ ದಲಿತರ ಕಾಲೊನಿಗೆ ಕುಡಿಯುವ ನೀರು ಮತ್ತು ಮೂಲ­ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ  ಕರ್ನಾಟಕ ಮಾದಿಗ ದಂಡೋರ ಕಾರ್ಯಕರ್ತರು ಸೋಮ­ವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಮಾದಿಗ ದಂಡೋರ  ಸಂಘಟನೆ ತಾಲ್ಲೂಕು ಅಧ್ಯಕ್ಷ ಎ.ಗಂಗಾಧರಪ್ಪ ಮಾತನಾಡಿ ಗ್ರಾಮ­ದಲ್ಲಿ  ನೂತನವಾಗಿ ದಲಿತರಿಗಾಗಿ ನಿರ್ಮಾಣ­ವಾಗಿರುವ ಬಡಾವಣೆಗೆ ಇದುವರೆಗೂ ವಿದ್ಯುತ್ ಸಂಪರ್ಕವಿಲ್ಲ. ಚರಂಡಿ ವ್ಯವಸ್ಥೆಯಿಲ್ಲ. ರಾತ್ರಿ ವೇಳೆಯಂತೂ ಬಡಾವಣೆ ಓಡಾಡಲು ಭಯ­ಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಳವೆ ಬಾವಿ ಕೊರೆಸಿದರೂ ಶುದ್ಧ ನೀರು ಘಟಕಕ್ಕೆ ಪಡೆಯಲಾಗಿದೆ. ಇದರಿಂದ ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರು ಇಲ್ಲದಂತಾಗಿದೆ ಎಂದು ಹೇಳಿದರು.ಆಧುನಿಕ ಕಾಲದಲ್ಲಿಯೂ ಸಹ ಇಲ್ಲಿನ ನಿವಾಸಿಗಳು ಅನಾಗರಿಕರಾಗಿ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  ನೀರು ಒದಗಿಸುವಂತೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದರು.

ದಲಿತ ಯುವ ಸೇನೆ ಅಧ್ಯಕ್ಷ ಬಾಬು,ಉಪಾಧ್ಯಕ್ಷ ಲಕ್ಕಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಗೋವಿಂ­ದಪ್ಪ, ಹನುಮಂತಪ್ಪ, ಲಕ್ಷ್ಮಮ್ಮ, ನಾಗಮ್ಮ, ಪ್ರಮೀಳಾ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.