ADVERTISEMENT

ಯುವಕ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2017, 8:50 IST
Last Updated 2 ಅಕ್ಟೋಬರ್ 2017, 8:50 IST
ಯುವಕ ಸಜೀವ ದಹನ
ಯುವಕ ಸಜೀವ ದಹನ   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅರೂರು ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಪೆರೇಸಂದ್ರದ ನಿವಾಸಿ ರಘು (35) ಎಂಬುವರು ಸಜೀವ ದಹನವಾಗಿದ್ದಾರೆ.

ಅರೂರು ಗ್ರಾಮದ ಹೊರವಲಯದಲ್ಲಿ ಬೆಳಿಗ್ಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಗ್ರಾಮಸ್ಥರು ಹತ್ತಿರ ಹೋಗಿ ನೋಡಿದಾಗ ಈ ಘಟನೆಗೆ ಬೆಳಕಿಗೆ ಬಂದಿದೆ.

‘ರಘು ಅವರು ಭಾನುವಾರ ರಾತ್ರಿ ಮನೆಗೆ ಹೋಗಿರಲಿಲ್ಲ. ಜೀವನದಲ್ಲಿ ಜುಗುಪ್ಸೆಗೊಂಡಿದ್ದ ಅವರು ಇತ್ತೀಚೆಗೆ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರ ಪೋಷಕರು ತಿಳಿಸಿದ್ದಾರೆ’ ಎಂದು ಗುಡಿಬಂಡೆ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.