ADVERTISEMENT

ಯುವಜನರಿಗೆ ಭಗೀರಥ ಮಾದರಿಯಾಗಲಿ

ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಭಗೀರಥ ಮಹರ್ಷಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2019, 11:13 IST
Last Updated 11 ಮೇ 2019, 11:13 IST
ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.   

ಚಿಕ್ಕಬಳ್ಳಾಪುರ: ‘ಒಂಟಿ ಕಾಲಿನಲ್ಲಿ ನಿಂತು ತಪಸ್ಸು ಮಾಡಿ ಶಿವನ ಮುಡಿಯಿಂದ ಗಂಗೆಯನ್ನು ಧರೆಗಿಳಿಸಿದ ಭಗೀರಥ ಮಹರ್ಷಿಯ ಛಲ ಇಂದಿನ ಯುವಜನರಿಗೆ ಮಾದರಿಯಾಗಬೇಕು’ ಎಂದು ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಕಾರಣಕ್ಕೆ ಶನಿವಾರ ನಗರದ ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಿದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭೂಮಿಗೆ ನೀರು ತರುವ ನಿಟ್ಟಿನಲ್ಲಿ ಭಗೀರಥ ಮಹರ್ಷಿ ತೋರಿದ ಬದ್ಧತೆಯಿಂದಾಗಿ ನಾವು ಅವರನ್ನು ಇಂದಿಗೂ ಸ್ಮರಿಸುತ್ತೇವೆ. ಜೀವನದಲ್ಲಿ ಯಾವುದೇ ಕಷ್ಟಕರ ಸಾಧನೆಯನ್ನು ಮಾಡಬೇಕೆಂದರೆ ಭಗೀರಥ ಪ್ರಯತ್ನ ಮಾಡಬೇಕು ಎಂದು ಹೇಳುವುದು ಛಲದಿಂದ ಏನಾದರೂ ಸಾಧಿಸಲು ಸಾಧ್ಯ ಎನ್ನುವುದಾಗಿದೆ’ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಉಪನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.