ADVERTISEMENT

ರಸ್ತೆ ದುರಸ್ತಿಗೆ ಕ್ರಮ: ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2011, 9:20 IST
Last Updated 20 ಅಕ್ಟೋಬರ್ 2011, 9:20 IST

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುತ್ತುಕದಹಳ್ಳಿಯಲ್ಲಿ ಸಂಪರ್ಕ ರಸ್ತೆಗಳ ಸಮಸ್ಯೆ ತೀವ್ರ ಸ್ವರೂಪ ದಲ್ಲಿದ್ದು, ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಪಿ.ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಮುತ್ತುಕದಹಳ್ಳಿಯಲ್ಲಿ ಈಚೆಗೆ ರೂ.40 ಲಕ್ಷ   ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
`ಮಳೆ ಗಾಲದಲ್ಲಿ ಸಂಪರ್ಕ ರಸ್ತೆಗೆ ಹಾನಿ ಯಾಗುವುದರಿಂದ ಗ್ರಾಮಸ್ಥರು ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ~ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಮುನೇಗೌಡ, ಕರ್ನಾಟಕ ಹಾಲು ಮಹಾಮಂಡಳಿ ನಿರ್ದೇಶಕ ಕೆ.ವಿ. ನಾಗರಾಜ, ತಾಲ್ಲೂಕು ಪಂಚಾ ಯಿತಿ ಉಪಾಧ್ಯಕ್ಷ ಕೆ.ಟಿ. ನಾರಾಯಣ ಸ್ವಾಮಿ, ಸದಸ್ಯ ಪಿ.ಎ.ಮೋಹನ್, ಜೆಡಿಎಸ್ ಮುಖಂಡರಾದ ಜಿ.ಆರ್. ನಾರಾಯಣಸ್ವಾಮಿ, ಕೆ.ಟಿ. ನಾರಾಯಣಸ್ವಾಮಿ, ಅಜ್ಜವಾರ ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.