ಶಿಡ್ಲಘಟ್ಟ: ಸತತ ಆರು ಬಾರಿ ಗೆದ್ದು ಎರಡು ಬಾರಿ ಕೇಂದ್ರದಲ್ಲಿ ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಬಂಗಾರಪೇಟೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯಸ್ವಾಮಿ ದೇಗುಲದಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷ ಕ್ಷೇತ್ರದತ್ತ ಮುಖ ಮಾಡದವರಿಗೆ ಚುನಾವಣೆ ಸಮೀಪವಿದ್ದಾಗ ಮಾತ್ರ ಮತದಾರರು ನೆನಪಾಗುತ್ತಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯ, ಕೇಂದ್ರದ ಬಜೆಟ್ ಮಂಡನೆ ಮುಗಿದಿದೆ. ಇದೀಗ ನೀರಾವರಿ ಯೋಜನೆ ಬಗ್ಗೆ ಪ್ರಸ್ತಾಪಿಸಿದರೆ ಏನು ಪ್ರಯೋಜನ? ಬಜೆಟ್ ಮಂಡನೆಗೂ ಮುನ್ನ ನೀರಾವರಿ ಯೋಜನೆ ಪ್ರಸ್ತಾಪಿಸಿ ಅದನ್ನು ಬಜೆಟ್ನಲ್ಲಿ ಬರುವಂತೆ ನೋಡಿಕೊಳ್ಳಬೇಕಿತ್ತಲ್ಲವೆ ಎಂದು ಟೀಕಿಸಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಮುಖಂಡರಾದ ಹನುಮಪ್ಪ, ಜೆ.ವಿ.ಸದಾಶಿವ, ಶ್ರೀರಾಮರೆಡ್ಡಿ, ಲೊಕೇಶ್, ಮುನಿವೆಂಕಟಪ್ಪ, ದಾಮೋದರ್ ಮತ್ತಿತರರು ವೇದಿಕೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.